Site icon Suddi Belthangady

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾರ ಪರ ಮತಯಾಚನೆ

ಪಡಂಗಡಿ: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಪೊಯ್ಯೇಗುಡ್ಡೆ ರಿಕ್ಷಾ ನಿಲ್ದಾಣದಲ್ಲಿ ಬಹಿರಂಗ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮತಯಾಚನೆ ನಡೆಸಿದರು.

ಹರೀಶ್ ಪೂಂಜರವರು ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಮೊದಲಿಗರು, ತಾಲೂಕಿನ ಸರ್ವತೋಮುಖ ಅಭಿವೃದ್ಧಿಯ ಹಿಂದೆ ಹರೀಶ್ ಪೂಂಜರವರ ಶ್ರಮವಿದೆ. ಮತ್ತೊಮ್ಮೆ ಮತದಾರರು ಅವರನ್ನು ಆಶೀವರ್ದಿಸಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದರು.ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಳೆದ 5 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮಾತನಾಡಿ, ಈ ಬಾರಿ 50 ಸಾವಿರ ಮತಗಳ ಅಂತರದಿಂದ ಭಾರತೀಯ ಜನತಾ ಪಾರ್ಟಿಯನ್ನು ಗೆಲ್ಲಿಸಬೇಕೆಂದರು.

ಈ ಸಂದರ್ಭದಲ್ಲಿ ಹಿರಿಯರಾದ ಕುಶಾಲಪ್ಪ ಗೌಡ,ಸದಾನಂದ ಪೂಜಾರಿ ಉಂಗೀಲಬೈಲು, ಜಯಾನಂದ ಗೌಡ,ಸಂತೋಷ್ ಕುಮಾರ್ ಜೈನ್, ಶ್ರೀನಿವಾಸ್ ರಾವ್, ಹಿತೇಶ್ ಕಾಪಿನಡ್ಕ, ವಿಶ್ವನಾಥ ಹೊಳ್ಳ,ಸಂತೋಷ್ ಶೆಟ್ಟಿ ಹಲ್ಲಂದೋಡಿ,ಅಶೋಕ್ ಗೋವಿಯಾಸ್,ರಾಜೇಶ್ ಆಚಾರ್ಯ ಹಾಗೂ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Exit mobile version