ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

0

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆ ಸಂಧರ್ಭದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪುರಂದರ, ಯೋಗೀಶ್ ನಡ, ಗಣೇಶ್ ಕಣಿಯೂರು ಮತ್ತು ಹರೀಶ್ ಗೇರುಕಟ್ಟೆ ವಿರುದ್ಧ ಬೆಳ್ತಂಗಡಿ ತಾಲೂಕು ದಂಡಾಧಿಕಾರಿಗಳು ನೀಡಿದ್ದ ಸಮನ್ಸ್ ಗೆ ಜಿಲ್ಲಾ ನ್ಯಾಯಾಧೀಶರು ತಡೆ ನೀಡಿದ್ದಾರೆ.
ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ವರದಿಯಂತೆ ಬೆಳ್ತಂಗಡಿ ತಹಶೀಲ್ದಾರರು ಸಿ.ಆರ್.ಪಿ.ಸಿ ಕಲಂ 113ರಂತೆ ಶಾಂತಿಪಾಲನೆಗಾಗಿ ಮುಚ್ಚಳಿಕೆ ಬರೆದು ಕೊಡುವಂತೆ ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ಅಭಿನಂದನ್ ಮತ್ತಿತರರು ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.ಅರ್ಜಿ ಪುರಸ್ಕರಿಸಿದ ನ್ಯಾಯಾಧೀಶರು ತಡೆಯಾಜ್ಞೆ ನೀಡಿದ್ದಾರೆ.

LEAVE A REPLY

Please enter your comment!
Please enter your name here