Site icon Suddi Belthangady

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಹಳೆಕೋಟೆಯ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ ಅವರು ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರ ಸಮ್ಮುಖದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ಬಿಜೆಪಿ ಪ್ರಣಾಳಿಕೆಯಲ್ಲಿರುವ ಅಂಶಗಳು: ನಗರದ ಪ್ರಮುಖ ರಸ್ತೆಗಳನ್ನು ಸೌಂದರೀಕರಣ, ಸುಸಜ್ಜಿತ ಸಂತೆ ಮಾರುಕಟ್ಟೆ ಪ್ರಾಂಗಾಣ ಅಭಿವೃದ್ಧಿ, ಸುಸಜ್ಜಿತ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ಗೂಡ್ಸ್, ಟೆಂಪೋ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ನಿವೇಶನರಹಿತರಿಗೆ ನಿವೇಶನವನ್ನು ಒದಗಿಸುವುದು, ನಗರದ ಎಲ್ಲಾ ವಸತಿರಹಿತರಿಗೆ ವಸತಿಯನ್ನು ಒದಗಿಸುವುದು, ನಗರದ ಪ್ರತೀ ಮನೆಗಳಿಗೆ 12 ಗಂಟೆ ಕುಡಿಯುವ ನೀರಿನ ವ್ಯವಸ್ಥೆ, ನಗರದ ಪ್ರಮುಖ ಕೆರೆಗಳ ಅಭಿವೃದ್ಧಿ, ನಗರದ ಆಯ್ದ ಭಾಗದಲ್ಲಿ ಚಿಣ್ಣರ ಪಾರ್ಕ್‌ ನಿರ್ಮಾಣ, ಸಾಲು ಮರದ ತಿಮ್ಮಕ್ಕ ಟೀ ಪಾರ್ಕನ್ನು 2 ನೇ ಹಂತದ ಕಾರ್ಯ ಯೋಜನೆಯಾಗಿ ಅಭಿವೃದ್ಧಿಗೊಳಿಸುವುದು, ಸರಕಾರಿ ಮಾದರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವುದು, ನಗರದ ಹೈಟೆಕ್ ಸ್ಮಶಾನ ನಿರ್ಮಾಣ, ನಗರದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಾಣ ಮಾಡುವುದು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಜನಿ ಕುಡ್ವ, ತಾಲೂಕು ಪ್ರಮುಖ್ ಜಯಾನಂದ ಗೌಡ, ಮಹಾಬಲ ಗೌಡ, ಮುಗುಳಿ ನಾರಾಯಣ ರಾವ್, ರಾಜೇಶ್ ಪ್ರಭು, ಪಟ್ಟಣ ಪಂಚಾಯತ್ ಸದಸ್ಯರಾದ ಶರತ್ ಕುಮಾರ್, ಲೋಕೇಶ್, ನಿರ್ದೇಶಕ  ಸದಸ್ಯರಾದ ಪ್ರಕಾಶ್, ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆಂರ್ಬುಡ ಉಪಸ್ಥಿತರಿದ್ದರು.

Exit mobile version