Site icon Suddi Belthangady

ಕೊಲ್ಲಿ, ಗೇರುಕಟ್ಟೆ, ಪದ್ಮುಂಜದಲ್ಲಿ ಬಿಜೆಪಿ ಪ್ರಚಾರ ಸಭೆ

ಬೆಳ್ತಂಗಡಿ: ಕೊಲ್ಲಿ, ಗೇರುಕಟ್ಟೆ ಮತ್ತು ಪದ್ಮುಂಜದಲ್ಲಿ ಮೇ.5 ರಂದು ಬಿಜೆಪಿ ಬಹಿರಂಗ ಪ್ರಚಾರ ಸಭೆ ನಡೆಯಿತು.
ಕೊಲ್ಲಿ, ಗೇರುಕಟ್ಟೆ, ಮತ್ತು ಪದ್ಮುಂಜದಲ್ಲಿ ಕಾರ್ಯಕರ್ತರ, ಮತದಾರರ ಉಪಸ್ಥಿತಿಯಲ್ಲಿ ನಡೆದ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ ಅವರು ಭಾಗಿಯಾದರು.


ಪ್ರಚಾರ ಸಭೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್‌ ಕೋಟ್ಯಾನ್, ಚಲನಚಿತ್ರ ನಟ ಹಿತೇಶ್ ಪೂಜಾರಿ ಕಾಪಿನಡ್ಕ, ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.


ಗೇರುಕಟ್ಟೆ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ, ಪಕ್ಷದ ಪ್ರಮುಖರಾದ ಚಾರ್ಮಾಡಿ ಕೊರಗಪ್ಪ ಗೌಡ, ಸ್ಥಳೀಯರಾದ ಸುರೇಶ್ ಕುಮಾರ್ ಅರ್.ಎನ್.ರಾಜೇಶ್ ಪೆಂರ್ಬುಡ, ಪೂವಪ್ಪ ಭಂಡಾರಿ, ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯಕ್ರಮಗಳ ಹಾಗೂ ಅನುದಾನ ಬಿಡುಗಡೆ ಮಾಡಿದರುವ ಬಗ್ಗೆ ಮತದಾರರಿಗೆ ತಿಳಿಸಿದರು.ಗೇರುಕಟ್ಟೆ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ.ಕೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ದಾಮೋದರ ಬೆರ್ಕೆ, ಕಳಿಯ ಗ್ರಾಮ ಪಂಚಾಯತ್ ಹಾಲಿ ಮತ್ತು ಮಾಜಿ ಸದಸ್ಯರು, ಕಳಿಯ, ನ್ಯಾಯತರ್ಪು ಶಕ್ತಿ ಕೇಂದ್ರ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Exit mobile version