ಉಜಿರೆ ಸಂತ ಅಂತೋಣಿ ಚರ್ಚ್ ನಲ್ಲಿ ಶಾಸಕ ಹರೀಶ್ ಪೂಂಜ ಮತಯಾಚನೆ

0

ಉಜಿರೆ : ಮೇ 10ರಂದು ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮೇ 7ರಂದು ಉಜಿರೆ ಸಂತ ಅಂತೋಣಿ ಚರ್ಚ್ ನಲ್ಲಿ ಮತ ಯಾಚನೆ ಮಾಡಿ ಮಾತನಾಡಿ ಚರ್ಚ್ ನಲ್ಲಿ ಕಳೆದ 5ವರ್ಷ ಅವಧಿ ಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿಕೊಡಲಾಗಿದೆ. ಇಂಟರ್ಲಕ್ 10ಲಕ್ಷ, ಒಳ ಚರಂಡಿ ನಿರ್ಮಾಣ ಕ್ಕೆ, 14ಲಕ್ಷ ನೀಡಿದ್ದೇನೆ ಮುಂದಿನ ದಿನಗಳಲ್ಲಿ ನನ್ನನ್ನು ಅಯ್ಕೆ ಮಾಡಿದಲ್ಲಿ ಇನ್ನೂ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ, ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಆಂಟೋನಿ, ಮಾಲಾಡಿ ಮಾಜಿ ತಾಲೂಕ್ ಪಂಚಾಯತ್ ಸದಸ್ಯ ಜೋಯಲ್ ಮೆಂಡೊಂನ್ಸ, ವಕೀಲರಾದ ಅಲೋಶಿಯಸ್ ಲೋಬೊ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಸುಸಾನ, ಲೈಲಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದನಾ, ಎಪಿಎಂಸಿ ಮಾಜಿ ನಿರ್ದೇಶಕಿ ಸೆಲೆಸ್ಟೀನ್ ಡಿಸೋಜ, ಫ್ರಾನ್ಸಿಸ್ ವಿ. ವಿ., ರಿಚರ್ಡ್ ಗೋವಿಯಸ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here