Site icon Suddi Belthangady

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯೆ ಪ್ರಿಯಾಂಕ ರಾಮಕೃಷ್ಣ ಗೌಡ ಇವರ ವಾರ್ಡ್ ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅನುಧಾನ ಕೋಡಿಸುವುದಾಗಿ ಭರವಸೆ ನೀಡಿ ನಂತರ ಯಾವುದೇ ಅನುದಾನ ನೀಡದೆ ಕಡೆಗಣಿಸಿರುತ್ತಾರೆ ಇದರಿಂದ ನೊಂದು ಬಿಜೆಪಿ ಪಕ್ಷವನ್ನು ತೊರೆದು ಮೇ.7 ರಂದು ಭಾನುವಾರ ಬೆಳ್ತಂಗಡಿ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.ಇದೆ ವೇಳೆ ಬಿಜೆಪಿ ಕಾರ್ಯಕರ್ತ ವಿಜಯ ನಾಯ್ಕ ಕಣಿಯೂರು ಮತ್ತು ಕಣಿಯೂರು ಬಿಜೆಪಿ ಬೂತ್ ಸಮಿತಿ ಕಾರ್ಯದರ್ಶಿ ರಾಧಕೃಷ್ಣ ಗೌಡ ಕೂಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ಭಗಿರಥ ಜಿ,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಈಶ್ವರ ಭಟ್ ಮಾಹಿಲ್ತೋಡಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಲೋಕೇಶ್ವರಿವಿನಯಚಂದ್ರ ಗೌಡ,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಮವಾತಿ ದೇಜಪ್ಪ ಗೌಡ,ಪಕ್ಷದ ವಕ್ತಾರರಾದ ಮನೋಹರ್ ಕುಮಾರ್ ಇಳಂತಿಲ ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿನುತ ರಜತ ಗೌಡ, ಲಾಯಿಲ ಗ್ರಾಮ ಪಂಚಾಯತ್ ಸದಸ್ಯರಾದ ರೇವತಿ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಸುಮತಿ ಶೆಟ್ಟಿ ,ಪಕ್ಷದ ಪ್ರಮುಖರಾದ ಸತೀಶ್ ಪದ್ಮುಂಜ,ಕಾಸಿಂ ಪದ್ಮುಂಜ, ಸರೋಜಿನಿ ,ಲಿಂಗಪ್ಪ ಬಂಗೇರ, ಚಂದ್ರಕಾಂತ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version