ಕಣಿಯೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

0

ಬೆಳ್ತಂಗಡಿ (ಮೇ-10): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಕ್ಷೇತ್ರ ವ್ಯಾಪ್ತಿಯ ಕುಪ್ಪೆಟ್ಟಿ, ಕರಾಯ, ತೆಕ್ಕಾರು, ಬಾರ್ಯ, ಕಡವಿನ ಬಾಗಿಲು, ತಣ್ಣೀರು ಪಂಥ ಚುನಾವಣೆಯ ಮತದಾನ ಕೇಂದ್ರಕ್ಕೆ ಭೇಟಿ ನೀಡಿ ಮತದಾರರಲ್ಲಿ ಮತವನ್ನು ನೀಡಬೇಕೆಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ಫಝಲ್ ಉಜಿರೆ, ಇನಾಸ್ ರೋಡ್ರಿಗಸ್, ಇಲ್ಯಾಸ್ ಕರಾಯ, ಶುಕುರ್ ಕುಪ್ಪೆಟ್ಟಿ, ಹನೀಸ್ ಗೇರುಕಟ್ಟೆ, ಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಇನ್ನೀತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here