ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ: ಹನ್ನೆರಡನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

0

ಬೆಳ್ತಂಗಡಿ: ಮೇ 10ರಂದು ನಡೆದ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ, ಮಂಗಳೂರು, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಮತ್ತು ಮೂಲ್ಕಿ ಮೂಡಬಿದ್ರೆ ಕ್ಷೇತ್ರಗಳ ಮತ ಎಣಿಕೆ ಮೇ 13ರಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿದೆ.
ಹನ್ನೆರಡನೇ ಸುತ್ತಿನಲ್ಲಿಯೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರಿಗಿಂತ ಹರೀಶ್ ಪೂಂಜ 11,360 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here