ಅರಸಿನಮಕ್ಕಿಯ ರೆಖ್ಯದಲ್ಲಿ ತೋಡಿಗೆ ಕಸ: ಗ್ರಾಮಸ್ಥರ ಪ್ರತಿಭಟನೆ, ಸ್ಥಳಕ್ಕೆ ಅಧಿಕಾರಿಗಳ ದೌಡು

0

ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಖ್ಯ ಗ್ರಾಮದ ಪೆಂಚಾರು ಹರಿಯುವ ತೋಡಿನ ಬಳಿ ಅರಸಿನಮಕ್ಕಿ ಪೇಟೆಯ ಕಸವನ್ನು ಎಸೆಯುತ್ತಿದ್ದಾಗ ಗ್ರಾಮಸ್ಥರು ತಡೆ ಹಿಡಿದು ಧರಣಿ ನಡೆಸಿದ್ದಾರೆ.

ತುಕಾರಾಮ‌ ಜಿ ಎಸ್, ಬಿನ್ ನಾರಾಯಣ ಗೌಡ ಇವರು ನೀಡಿರುವ ದೂರಿನ ಆಧಾರದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ಬಂದು ಪರಿಶೀಲನೆ ನಡೆಸಿದರು.ಈ ಬಗ್ಗೆ ಸೂಕ್ತ ತನಿಖೆ ನಡೆಸುವ ಭರವಸೆ ನೀಡಿದರು. ನಂತರ ಗ್ರಾಮಸ್ಥರು ಧರಣಿ ಹಿಂಪಡೆದಿದ್ದಾರೆ. ಇಷ್ಟಾದರೂ ಗ್ರಾಮ ಪಂಚಾಯತ್ ಸದಸ್ಯರು, ಅಧ್ಯಕ್ಷರು ಬಂದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here