ಬೆಳ್ತಂಗಡಿ ಹಿಂದೂ ಮುಖಂಡರು ಪುತ್ತೂರು ಆಸ್ಪತ್ರೆಗೆ ಭೇಟಿ- ಗಾಯಾಳುಗಳ ಆರೋಗ್ಯ ವಿಚಾರಣೆ

0

ಬೆಳ್ತಂಗಡಿ: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ಹಾಗೂ ಸದಾನಂದಗೌಡ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರಹಾಕಿದ್ದಕ್ಕೆ ಪೊಲೀಸರು ಬಂಧಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣವನ್ನು ಬೆಳ್ತಂಗಡಿ ತಾಲೂಕಿನ ಹಿಂದೂ ಸಂಘಟನೆಯ ಪ್ರಮುಖರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದರು.

ಈ ಸಂದರ್ಭದಲ್ಲಿ ಗುರುಪುರ ಮಠದ ವಜ್ರದೇಹಿ ಸ್ವಾಮೀಜಿಯವರು ಭೇಟಿ ನೀಡಿದರು. ಬೆಳ್ತಂಗಡಿ ತಾಲೂಕಿನ ವಿಶ್ವ ಹಿಂದೂ ಪರಿಷತ್‌ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋರಕ್ಷ ಪ್ರಮುಖ್ ರಮೇಶ್ ಧರ್ಮಸ್ಥಳ, ಬಜರಂಗದಳ ಸಹಸಯೋಜಕರಾದ ಸುದೀ‌ ಚಾರ್ಮಾಡಿ, ರಿಜೇಶ್ ಗುರುವಾಯನಕೆರೆ, ಸತೀಶ್ ಮರಕಡ, ಸುರಕ್ಷಾ ಪ್ರಮುಖರಾದ ರತನ್ ಕೂಲ್ಕಿ , ಪ್ರವೀಣ್ ಶೆಟ್ಟಿ, ಪ್ರಚಾರ ಪ್ರಮುಖರಾದ ಗುರು ಲಾಯಿಲ ಉಪಸ್ಥಿತರಿದರು.

LEAVE A REPLY

Please enter your comment!
Please enter your name here