ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

0

ಬೆಳ್ತಂಗಡಿ: ಕರ್ನಾಟಕ ಸರಕಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಶ್ರೀ ಸಿದ್ದರಾಮಯ್ಯ, ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ. ಕೆ. ಶಿವಕುಮಾರ್ ಅಂಗವಾಗಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ಪಕ್ಷದ ವತಿಯಿಂದ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಹಾಗೂ ಕಾರ್ಯಕ್ರಮದ ನೇರ ವೀಕ್ಷಣೆಗೆ ಟಿ.ವಿ ಪರದೆ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ, ಬ್ಲಾಕ್ ಕಾಂಗ್ರೇಸ್ ನಗರ ಅಧ್ಯಕ್ಷ ಕೆ.ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ, ಕೆಪಿಸ ಸಿ ಸದಸ್ಯರುಗಳಾದ ಮೋಹನ್ ಶೆಟ್ಟಿಗಾರ, ಕೇಶವ ಗೌಡ ಪಿ, ಕೆಪಿಸಿಸಿ ಮಾಜಿ ಸದಸ್ಯ ರಾಜಶೇಖರ್ ಅಜ್ರಿ, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಎ. ಸಿ. ಮ್ಯಾತ್ಯು, ಬ್ಲಾಕ್ ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ನೆರಿಯ, ಹಿಂದುಳಿದ ಘಟಕದ ಅಧ್ಯಕ್ಷ ದಯಾನಂದ ದೇವಾಡಿಗ, ಗ್ರಾಮೀಣ ಘಟಕ ಅಧ್ಯಕ್ಷ ರಾಜಣ್ಣ, ಎಸ್ ಸಿ ಘಟಕದ ಅಧ್ಯಕ್ಷ ರವಿ, ಪ್ರಮುಖರಾದ ಚಂದು ಎಲ್., ವಸಂತ ಬಿ.ಕೆ, ನೇಮಿರಾಜ ಕಿಲ್ಲೂರು, ಬ್ಲಾಕ್ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ದಯಾನಂದ ಬೆಳಾಲು, ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ಡಿ, ಜನಾರ್ದನ, ಎಪಿಎಂಸಿ ಮಾಜಿ ಅಧ್ಯಕ್ಷ ಭರತ್ ಕುಮಾರ್, ಪಕ್ಷದ ವಕ್ತಾರ ಮನೋಹರ್ ಕುಮಾರ್ ಇಳಂತಿಲ, ಪ್ರಮುಖರಾದ ಈಶ್ವರ ಭಟ್ ಎಂ, ಖಾಲಿದ್ ಕಕ್ಕೇನಾ, ಆಶಾಲತಾ, ನಾರಾಯಣ ಗೌಡ ಮುಂಡಾಜೆ, ನಾಮದೇವ್ ರಾವ್ ಮುಂಡಾಜೆ, ಅಬ್ಬಾಸ್ ಬಟ್ಲಡ್ಕ, ರವೀಂದ್ರ ಪೂಜಾರಿ ನಾರಾವಿ, ಮಹಮ್ಮದ್ ನೆರಿಯ, ಸಬಾಸ್ಟಿನ್ ನೆರಿಯ, ರಾಮಕೃಷ್ಣ ಗೌಡ ಇಂದಬೆಟ್ಟು ಮೊದಲಾದವರು ಕಾರ್ಯಕರ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here