ಬೆಳ್ತಂಗಡಿ: ಬಿಜೆಪಿ ಮಂಡಲದ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

0

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿಗೆ ಆಯ್ಕೆಯಾದ ಹರೀಶ್ ಪೂಂಜರಿಗೆ ಗೌರವಾರ್ಪಣೆ ಹಾಗೂ ಬಿಜೆಪಿ ಪಕ್ಷದ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ ಮೇ.22 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ,ಜಿಲ್ಲಾ ಉಪಾಧ್ಯಕ್ಷರು ಚುನಾವಣಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯ್ಕ, ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ, ಪಕ್ಷದ ಹಿರಿಯರು ಅಭ್ಯರ್ಥಿಯ ಎಜೇಂಟ್ ಸುಬ್ರಹ್ಮಣ್ಯ ಕುಮಾರ್ ಆಗರ್ತ,ಚುನಾವಣಾ ಕ್ಷೇತ್ರ ಪ್ರಭಾರಿ ಯತೀಶ್ ಅರ್ವರ್,ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ ಜನಾರ್ದನ, ಎಸ್ ಟಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಚೆನ್ನಕೇಶವ ನಾಯ್ಕ , ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಕಾಮಿಡಿ ಕಿಲಾಡಿ ಅನಿಶ್ ವೇಣೂರು, ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಶ್ರೀನಿವಾಸ ರಾವ್, ಉಪಾಧ್ಯಕ್ಷ ಸೀತಾರಾಮ ಬಿ. ಎಸ್.,ಪದಾಧಿಕಾರಿಗಳು, ಹಿರಿಯ ನಾಯಕರುಗಳು,ವಿವಿಧ ಗ್ರಾಮಗಳ ಕಾರ್ಯಕರ್ತರು ಹಾಜರಿದ್ದರು.

ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜ ಮತ್ತು ಪ್ರಭಾರಿಗಳಾದ ಹರಿಕೃಷ್ಣ ಬಂಟ್ವಾಳ ಮತ್ತು ಯತೀಶ್ ಅರ್ವರ್ ರವರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here