ಕೊಕ್ಕಡ ಜೇಸಿ ಸಾಮಾನ್ಯ ಸಭೆ

0

ಕೊಕ್ಕಡ: ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಸಾಮಾನ್ಯ ಸಭೆಯು ಕೊಕ್ಕಡ ಮರಿಯಾಕೃಪಾ ಕಚೇರಿಯಲ್ಲಿ ಮೇ.23 ರಂದು ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು.ವಲಯ 15 ವಲಯಾಡಳಿತ ಸಮಿತಿ ಸಭೆಯನ್ನು ಕೊಕ್ಕಡ ಘಟಕದ ಆತಿಥ್ಯದಲ್ಲಿ ಮೇ.28 ರಂದು ನಡೆಸಲು ನಿರ್ಧರಿಸಲಾಯಿತು.

ಜೂನ್ ತಿಂಗಳಲ್ಲಿ ಬೃಹತ್ ರಕ್ತದಾನ ಶಿಬಿರ, ರಕ್ತದಾನಿಗಳಗೆ ಅಭಿನಂದನೆ ನಡೆಸುವುದರ ಕುರಿತು, ಜೇಸಿ ಫೌಂಡೇಶನಿಗೆ ಹೆಚ್.ಜಿ.ಎಫ್. ಕೊಡುಗೆಯನ್ನು ನೀಡುವುದು, ಊರಿನ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ, ಮಧ್ಯಂತರ ಸಮ್ಮೇಳನದಲ್ಲಿ ಭಾಗವಹಿಸುವುದು, ನೂರು ಶೇಕಡ ಫಲಿತಾಂಶ ಸಾಧಿಸಿದ ಪ್ರೌಢ ಶಾಲೆಗಳಿಗೆ ಅಭಿನಂದನೆ ಮತ್ತು ಕ್ಯಾನ್ಸರ್ ಪೀಡಿತ ಬಡ ಮಹಿಳೆಗೆ ಸಹಾಯಧನ ನೀಡಲು ನಿರ್ಧರಿಸಲಾಯಿತು.

ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಕೆ. ಶ್ರೀಧರ್ ರಾವ್ ಶುಭ ಹಾರೈಸಿದರು.ಯುವ ಜೇಸಿ ಶ್ರವಣ್ ವರದಿ ವಾಚಿಸಿದರು.

ಉಪಾಧ್ಯಕ್ಷರಾದ ಯು.ನರಸಿಂಹ ನಾಯಕ್, ಹರಿಶ್ಚಂದ್ರ ಆಚಾರ್ಯ, ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಅವರು ಸಲಹೆ ಸೂಚನೆಗಳನ್ನು ನೀಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ ವಂದಿಸಿದರು.

LEAVE A REPLY

Please enter your comment!
Please enter your name here