ಶಾಸಕ ಹರೀಶ್ ಪೂಂಜ ವಿರುದ್ಧ ಮಹಿಳಾ ಕಾಂಗ್ರೆಸ್ ದೂರು

0

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇ.22ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಇವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.‌ ಅಧ್ಯಕ್ಷೆ ನಮಿತ ಕೆ. ಪೂಜಾರಿ, ಉಪಾಧ್ಯಕ್ಷೆ ಮಮತಾ , ಪ್ರಧಾನ ಕಾರ್ಯದರ್ಶಿ ಸುಮಂಗಳ ನಾಯ್ಕ್, ಕಾರ್ಯದರ್ಶಿಗಳಾದ ಸಿಂಧೂ ಡಿನ್ನಿಸ್, ರೇವತಿ ಉಜಿರೆ, ಸದಸ್ಯರಾದ ಕಸ್ತೂರಿ ಪೂಜಾರಿ ಮತ್ತು ಕುಸುಮ ಮಾಚಾರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here