Site icon Suddi Belthangady

ಉಜಿರೆ ಗ್ರಾ.ಪಂ ಸಿಬ್ಬಂದಿ ನಾಗೇಶ್ ಸೇವೆಯಿಂದ ಅಮಾನತು – ಪಿಡಿಓ ಆದೇಶ

ಉಜಿರೆ: ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮನೆ-ಮನೆಗೆ ಭೇಟಿ ನೀಡಿ ಮತಯಾಚಿಸಿರುವ ಮತ್ತು ಬಿಜೆಪಿ ವಿಜಯೋತ್ಸವದ ಮೆರವಣಿಗೆಯಲ್ಲಿ ಪಕ್ಷದ ಧ್ವಜ ಹಿಡಿದು ಭಾಗಿಯಾಗಿದ್ದ ಉಜಿರೆ ಗ್ರಾ.ಪಂ ಸಿಬ್ಬಂದಿ ನಾಗೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಂದು ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ ಆದೇಶ ಹೊರಡಿಸಿದ್ದಾರೆ.

ನಾಗೇಶ್ ಅವರ ವಿರುದ್ಧ ಸಾರ್ವಜನಿಕರು ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದ್ದರು.ಪ್ರಕರಣದ ತನಿಖೆ ನಡೆಸಿದ ಪಿಡಿಓರವರು ಆ ಆದೇಶ ಹೊರಡಿಸಿದ್ದಾರೆ.

Exit mobile version