Site icon Suddi Belthangady

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿ (ರಿ) ನಡ ಇದರ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

ನಡ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಇದರ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆಯು ಮೇ 28ರಂದು ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನ ನಡ – ಮಂಜೊಟ್ಟಿ ಇಲ್ಲಿ ನಡೆಯಿತು.

ಬೆಳಗ್ಗೆ ಗಣಹೋಮ ಭಜನೆ ಗುರುಪೂಜೆ ಮತ್ತು ಸಭಾ ಕಾರ್ಯಕ್ರಮ ಜರುಗಿತು.

ಅನನ್ಯ ಇವರ ಪ್ರಾರ್ಥನೆಯೊಂದಿಗೆ ಜಯಕುಮಾರ್ ಸುರ್ಯ ಇವರು ಸರ್ವರನ್ನು ಸ್ವಾಗತಿಸಿದರು.

ಈ ಕಾರ್ಯಕ್ರಮದಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು ನಿವೃತ್ತ ಮುಖ್ಯೋಪಾಧ್ಯಯರು ಆಗಿರುವ ಜ್ಯೋತಿ ಕೃಷ್ಣಪ್ಪ ಪೂಜಾರಿ ಕುದುಪುಲ, ಮಾಜಿ ಸೈನಿಕರು ಆಗಿರುವ ಶಿವಾಜಿ, ಡಾಕ್ಟರ್ ಆಗಿರುವ ಹವ್ಯಶ್ರಿ ಮೋಹನ್ ರಾಜ್, ರಾಜ್ಯ ಪ್ರಶಸ್ತಿ ವಿಜೇತ ಜಯಾನಂದ ಅಂಕಾಜೆ, ಇವರನ್ನು ಸನ್ಮಾನಿಸಲಾಯಿತು.

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ,ದೇವೇಂದ್ರ ಪೂಜಾರಿ , ಶ್ರೀ ಕಾರ್ತಿಕ್, ಶ್ರೀಮತಿ ವಸಂತಿ ವಸಂತ ಕುತ್ರೊಟ್ಟು , ಶ್ರೀ ಜಯಕುಮಾರ್ ಸುರ್ಯ , ಶ್ರೀ ಚಿದಾನಂದ ಪೂಜಾರಿ ಎಲ್ದಡ್ಕ, ಅಭಿನಂದನ್ ಉಪಸ್ಥಿತರಿದ್ದರು.

ಗುರುನಾರಾಯಣ ಸ್ವಾಮಿ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಮೀನಾಕ್ಷಿ.ಕೆ ಬಂಡಾರಿಕೋಡಿ ಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Exit mobile version