ಧರ್ಮಸ್ಥಳ ಮಡ್ಯಾಲ ಚಡಾವಿನಲ್ಲಿ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ

0

ಧರ್ಮಸ್ಥಳ: ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮಡ್ಯಾಲ ಚಾಡವು ಎಂಬಲ್ಲಿ ಮೇ 28 ರಂದು ಬೆಳಗ್ಗೆ ನಡೆದಿದೆ.

ಘಟನೆ ಪರಿಣಾಮ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇ 28 ರಂದು ಬೆಳಗ್ಗೆ ಸುಧೀನ್ ಎಂಬಾತ ತಮ್ಮ ದ್ವಿಚಕ್ರ ವಾಹನದಲ್ಲಿ ಕನ್ಯಾಡಿಯಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದರು.

ಈ ವೇಳೆ ಉಜಿರೆ ಕಡೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆ ಪರಿಣಾಮ ಸುಧೀನ್ ಗಂಭೀರ ಗಾಯಗೊಂಡಿದ್ದಾರೆ.

ತಕ್ಷಣವೇ ಸ್ಥಳೀಯರು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಚಿಕಿತ್ಸೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here