Site icon Suddi Belthangady

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ; ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ಶಿರ್ಲಾಲು -ಸುಲ್ಕೇರಿಮೊಗ್ರು ಇದರ ವಾರ್ಷಿಕ ಮಹಾಸಭೆ ದಿನಾಂಕ ಮೇ 28 ರಂದು ಹುರುoಬಿದೊಟ್ಟು ದೇವಸ್ಥಾನದ
ವಠಾರದಲ್ಲಿ ನಡೆಯಿತು.

ಸಭೆಯಲ್ಲಿ ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಜಯ ನಾಯ್ಕ, ಉಪಾಧ್ಯಕ್ಷರಾಗಿ ಸಂಜೀವ ನಾಯ್ಕ, ಕಾರ್ಯದರ್ಶಿಯಾಗಿ ರವಿ ನಾಯ್ಕ, ಜೊತೆ ಕಾರ್ಯದರ್ಶಿಯಾಗಿ ಸುರೇಶ ನಾಯ್ಕ, ಕೋಶಾಧಿಕಾರಿ ಯಾಗಿ ಪ್ರಭಾಕರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಾಲ, ಸುನಿಲ್, ಪ್ರಸಾದ್, ದಿನೇಶ, ಶ್ರೀಮತಿ ರೂಪಾ, ಶ್ರೀಮತಿ ಚಂದ್ರಾವತಿ, ಓಬಯ್ಯ, ಚಂದ್ರ ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದ ಮೊದಲಿಗೆ ಕುl ಹಸ್ತಾ, ಕುl ಪುಣ್ಯಶ್ರೀ, ಕುl ಗೀತಾ ಪ್ರಾರ್ಥಿಸಿದರು. ಸುರೇಶ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು. ಗ್ರಾಮದ ಗುರಿಕಾರರಾದ ಚಿನ್ನಯ ನಾಯ್ಕ ಸಂಜೀವ ನಾಯ್ಕ ಉಪಸ್ಥಿತರಿದ್ದರು. ಉಮೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

Exit mobile version