ಬಯಲು ಸ.ಉ.ಪ್ರಾ.ಶಾಲಾ ಪ್ರಾರಂಭೋತ್ಸವ

0

ನೆರಿಯ: ನೆರಿಯ ಗ್ರಾಮದ ಬಯಲು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಬೋತ್ಸವವು ಶಾಲಾ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಯಂಸಿ ಅಧ್ಯಕ್ಷರಾದ ಬಾಲಕೃಷ್ಣ ಗೌಡರವರು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನೆರಿಯ ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್‌ರವರು ಒಂದನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಸಮವಸ್ತ್ರ ನೀಡಿ ಶುಭ ಹಾರೈಸಿದರು.

ಅದ್ಯಕ್ಷೀಯ ಭಾಷಣ ಮಾಡಿದ ಎಸ್‌ಡಿಯಂಸಿ ಅಧ್ಯಕ್ಷರು ಸರಕಾರಿ ಶಾಲೆಗಳ ಬಲವರ್ಧನೆಗೆ ಊರಿನವರ ಸಹಕಾರ ಅತ್ಯಗತ್ಯ ಎಂಬದಾಗಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಎಸ್‌ಡಿಯಂಸಿ ಸದಸ್ಯರು, ಪೋಷಕರು, ಅಡುಗೆ ಸಿಬ್ಬಂದಿಗಳು, ಉಪಸ್ಥಿತರಿದ್ದರು.

ಮಕ್ಕಳಿಗೆ ಸಿಹಿಯೂಟ ನೀಡಲಾಯಿತು.ಮುಖ್ಯಶಿಕ್ಷಕರು ಸ್ವಾಗತಿಸಿ, ಸಹಶಿಕ್ಷಕರು ನಿರೂಪಣೆ ಮಾಡಿ, ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here