ಬೆಳ್ತಂಗಡಿ ಶ್ರೀ ಧ. ಮ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ” ಶ್ರೀ ಮಂಜುನಾಥ ದಳದ” ಕಬ್, ಬುಲ್ ಬುಲ್ಸ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ವಿಶ್ವ ಪರಿಸರಳ ದಿನದ ಅಂಗವಾಗಿ ಸುಮಾರು 50 ಬೀಜದ ಉಂಡೆಯನ್ನು ತಯಾರಿಸಿದರು.

ಕಾಡು ಉಳಿಸಿ ನಾಡು ಬೆಳೆಸಿ ಎಂಬ ಘೋಷಣೆಗಳೊಂದಿಗೆ ಜಾಥದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು ಟೀಮ್ ಲೀಡರ್ ಗೈಡ್ ವಿದ್ಯಾರ್ಥಿ ಕುಮಾರಿ ಸಿಂಚನ , ಹಾಗೂ ಸ್ಕೌಟ್ ಟೀಮ್ ಲೀಡರ್ ಮಾಸ್ಟರ್ ಜೈದೀಪ್ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಕೌಟ್ ಗೈಡ್ ನ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮವನ್ನು ಸಂಘಟಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here