ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಹದಿಹರೆಯದ ಸಬಲೀಕರಣ ಕಾರ್ಯಕ್ರಮ

0

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಅರ್ಸುಲೈನ್ ಫ್ರಾನ್ಸಿಸ್ಕನ್ ಶಿಕ್ಷಣ ಸಂಸ್ಥೆಯ ಮುಂದಾಳತ್ವದಲ್ಲಿ ಹದಿಹರೆಯದ ಸಬಲೀಕರಣ ಕಾರ್ಯಕ್ರಮದ ಪುನಶ್ಚೇತನ ನಡೆಯಿತು.ಪೂರ್ವಾಹ್ನ 8 ಮತ್ತು 9ನೇ ತರಗತಿಯ ಪೋಷಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಅಪರಾಹ್ನ ಎಲ್ಲಾ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.ಹದಿಹರೆಯದಲ್ಲಿ ಮಕ್ಕಳಲ್ಲಿ ಕಂಡು ಬರುವ ದೈಹಿಕ, ಮಾನಸಿಕ, ಆದ್ಯಾತ್ಮಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.ಪ್ರಚಲಿತ ದಿನಗಳಲ್ಲಿ ದುಶ್ಚಟಗಳಿಗೆ ಬಲಿಯಾಗುವ ಅಂಕಿ ಸಂಖ್ಯೆ ಹೆಚ್ಚಾಗಿದೆ. ಇದರ ಪ್ರಯುಕ್ತ ಕಳೆದ ಶೈಕ್ಷಣಿಕ ವರ್ಷದಿಂದ ಈ ಕಾರ್ಯಕ್ರಮವನ್ನು ಶಾಲೆಗಳಲ್ಲಿ ಹಮ್ಮಿಕೊಂಡು ಆಪ್ತ ಸಲಹೆಗಳ ಮೂಲಕ ಸಂಪನ್ಮೂಲ ವ್ಯಕ್ತಿ ವಂದನೀಯ ಭಗಿನಿ ಲಿಲ್ಲಿ ಪುಷ್ಪರವರು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here