Site icon Suddi Belthangady

ಬೆಳ್ತಂಗಡಿ ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ಇದರ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸೂಪರ್ ಡೆಂಟ್ ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿಯ ಸುರೇಶ್ ಜೈನ್, ಸಾರ್ವಜನಿಕ ಆಸ್ಪತ್ರೆಯ ಕಾರ್ಯಕ್ರಮ ನಿರೂಪಕ ಅಜಯ್, ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರ ರೋಷನ್, ರಾಜ ಕೇಸರಿ ಸಂಘಟನೆ ಉಪಾಧ್ಯಕ್ಷ ಚಂದ್ರಶೇಖರ್, ಸದಸ್ಯರುಗಳಾದ ವಿಶ್ವನಾಥ್ ಪೂಜಾರಿ, ಸಂದೇಶ್, ಅಕ್ಷಯ್, ಸಂಪತ್, ಶಶಿಕಾಂತ್ ಪ್ರಶಾಂತ್, ವಸಂತ್ ಉಪಸ್ಥಿತರಿದ್ದರು.

Exit mobile version