Site icon Suddi Belthangady

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರು ಮೂಲದ ಅರುಣ್ ಫುರ್ಟಾಡೊ ನೇಮಕ

ಮಡಂತ್ಯಾರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿ (ಆಡಳಿತ) ಆಗಿ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಮೂಲದ ಅರುಣ್ ಫುರ್ಟಾಡೊ ಅವರನ್ನು ನಿಯೋಜನೆ ಮಾಡಲಾಗಿದೆ.

ಈ ಕುರಿತು ಸರಕಾರದ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ) ಅಧೀನ ಕಾರ್ಯದರ್ಶಿ ಕೆ.ವಿ ಅಶೋಕ ಅವರು ಆದೇಶ ಹೊರಡಿಸಿದ್ದಾರೆ.

ಅರುಣ್ ಫುರ್ಟಾಡೊ, ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ. ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ ಹುದ್ದೆಗೆ ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿ ಆದೇಶ ಹೊರಡಿಸಲಾಗಿದೆ.

ಅರುಣ್ ಪೂಟರ್ಡೋ ಕೆ.ಎ.ಎಸ್. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.

Exit mobile version