ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

0

ಬೆಳ್ತಂಗಡಿ: ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಜೂನ್ 9 ರಂದು ನಡೆಯಿತು.

ಪ್ರತಿಭಟನೆಯಲ್ಲಿ ವಿದ್ಯುತ್ ದರ ಹೆಚ್ಚಳ ಬೇಡವೇ ಬೇಡ.ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳ ಭರವಸೆ ನೀಡಿ ಮತ ಕೇಳಿ ಇದೀಗ ವಚನಭ್ರಷ್ಟ ಎಂದು ಎನಿಸಿಕೊಂಡಿದೆ.

ಇಂಧನ ಸಚಿವ ಕೆ.ಜಾರ್ಜ್, ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು.

ಹೊಸ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದು ಒಂದು ತಿಂಗಳು ಪೂರ್ತಿಯಾಗಿಲ್ಲ ಆದರೆ ಪ್ರತಿಭಟನೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಕಾಂಗ್ರೆಸ್ ನಮಗೆ ಮೋಸ ಮಾಡಿತಲ್ಲ ಎಂಬ ಭಾವನೆ ಜನಸಾಮಾನ್ಯರದ್ದು. ಈ ಭಾವನೆ ಜನರಲ್ಲಿ ಮೂಡಿದಾಗ ಪ್ರತಿಪಕ್ಷ ಆಡಳಿತ ಪಕ್ಷವನ್ನು ಎಚ್ಚರಿಸುವ ಕಾರ್ಯ ಮಾಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಈ ಸಂದರ್ಭದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಮಂಡಲ ಅಧ್ಯಕ್ಷ ‌ಜಯಂತ್ ಕೋಟ್ಯಾನ್, ಜಿಲ್ಲಾ ಉಪಾಧ್ಯಕ್ಷ ಕೊರಗಪ್ಪ ನಾಯಕ್, ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮೀ, ಸಂಘಟನಾ ಕಾರ್ಯದರ್ಶಿ ಪ್ರಸಾದ್, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here