ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ

0

ಅಳದಂಗಡಿ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಜೂ.11 ರಂದು ಸೋಮನಾಥೆಶ್ವರೀ ದೇವಸ್ಥಾನ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ದೇಶ ಸೇವೆ ಗೈದ ವೀರಯೋಧರಾದ ಉಮೇಶ್ ಮಾಲಾಡಿ, ಉಮೇಶ್ ಬಂಗೇರನ್ನು ಸನ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿ ಅತ್ಯಧಿಕ ಅಂಕ ಗಳಿಸಿದ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಬೆಳ್ತಂಗಡಿ ವಿದ್ಯಾರ್ಥಿ ಅಭಿಷೇಕ್ ಎಂ.ವಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ | ಪದ್ಮಪ್ರಸಾದ್ ಅಜಿಲರು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಕೆ ವಸಂತ ಬಂಗೇರ, ಸಮಾಜ ಸೇವಕ ರವಿ ಕಟಪಾಡಿ, ಅಳದಂಗಡಿ ಗ್ರಾ.ಪಂ.ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ,ಶ್ರಿ ಸತ್ಯದೇವತೆ ದೈವಸ್ಥಾನ ಅಳದಂಗಡಿ ಆಡಳಿತದಾರರು ಶ್ರೀ ಶಿವಪ್ರಸಾದ್ ಅಜಿಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here