ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಯಶಸ್ವಿ ಅನುಷ್ಠಾನದ ಕುರಿತು ಬ್ಲಾಕ್ ಮಟ್ಟದಲ್ಲಿ ಸಭೆ

0

ಬೆಳ್ತಂಗಡಿ: ಕಾಂಗ್ರೇಸ್ ಪಕ್ಷದ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲಿ ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೋಂದಣಿ ಮಾಡಿ ಕೊಡುವ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಕಾರ್ಯಕ್ರಮ ಬೆಳ್ತಂಗಡಿ ನಾರಾಯಣ ಗುರು ಸಭಾಭವನದಲ್ಲಿ ಜೂ.13 ರಂದು ನಡೆಯಿತು.ತರಬೇತಿಯನ್ನು ಜಿಲ್ಲಾ ತರಬೇತುದಾರ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿ’ಸೋಜಾ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಉಭಯ ಬ್ಲಾಕ್ ಕಾಂಗ್ರೇಸ್ ಘಟಕದ ಅಧ್ಯಕ್ಷರುಗಳಾದ ಕೆ.ಶೈಲೇಶ್ ಕುಮಾರ್, ರಂಜನ್ ಜಿ.ಗೌಡ, ಮುಖಂಡರುಗಳಾದ ಸುಭಾಶ್ಚಂದ್ರ ರೈ ಕುಳಾಲು, ವೃಷಭ ಆರಿಗ, ಕೇಶವ ಗೌಡ ಪಿ., ಅಬ್ದುಲ್ ರಹಿಮಾನ್ ಪಡ್ಪು, ಅಭಿನಂದನ್ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here