Site icon Suddi Belthangady

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ – ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ ಬೆಳ್ತಂಗಡಿ ಕೋರ್ಟ್

ಬೆಳ್ತಂಗಡಿ : ಜೆ.ಎಮ್.ಎಫ್.ಸಿ ನ್ಯಾಯಾಲಯ ಬೆಳ್ತಂಗಡಿ ನ್ಯಾಯಾಲಯದ ಚೆಕ್ ಪ್ರಕರಣದ ವಾರೆಂಟ್ ಆರೋಪಿ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕಡ್ಯ ನಿವಾಸಿ ಜನಾರ್ಧನ ಗೌಡರ ಮಗನಾದ ಭರತ್.ಪಿ(36) ಎಂಬವರನ್ನು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು ಶಿವಕುಮಾರ್ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಅನೀಲ್ ಕುಮಾರ್ ರವರ ಮಾರ್ಗದರ್ಶನದಂತೆ ಜೂನ್ 15 ರ 7 ಗಂಟೆಗೆ ಸುಳ್ಯ ತಾಲೂಕಿನ ಮಡಪ್ಪಾಡಿ ಬಸ್ಸು ತಂಗುದಾಣದ ಬಳಿಯಿಂದ ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ರಾಜೇಶ್ ಮತ್ತು ರೋಶನ್ ರವರು ವಶಕ್ಕೆ ಪಡೆದು ಮಾನ್ಯ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

Exit mobile version