ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಡಿ.ಎಚ್.ಓ ಹಾಗೂ ವಸಂತ ಬಂಗೇರ ಭೇಟಿ

0

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಗೆ ಕಳೆದ ವಾರ ಬಂಗೇರ ಭೇಟಿ ನೀಡಿದ್ದು, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಡಯಾಲಿಸಿಸ್ ಘಟಕದಲ್ಲಿ ತೊಂದರೆಗಳನ್ನು ಮಾಜಿ ಶಾಸಕ ವಸಂತ ಬಂಗೇರ ಆರೋಪಿಸಿದ್ದು ಹಾಗೂ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.15 ದಿನಗಳಲ್ಲಿ ಆಸ್ಪತ್ರೆಯ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದು ಜೂ.17 ರಂದು ವೈದ್ಯಾಧಿಕಾರಿಗಳು ಹಾಗೂ ವಸಂತ ಬಂಗೇರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ‌ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು ಇದಕ್ಕೆ ತಕ್ಷಣ ಪರಿಹಾರ ಮಾಡುವಂತೆ ವಸಂತ ಬಂಗೇರ ಆಧಿಕಾರಿಗಳಿಗೆ ಸಂಪರ್ಕಿಸಿ‌ ಡಿ.ಎಚ್.ಓ ಅವರಿಗೆ ತಿಳಿಸಿದರು.

ಮಾಧ್ಯಮದವರ ಜೊತೆ ಮಾತಾಡಿದ ಡಿ.ಎಚ್.ಓ ಡಾ. ಕಿಶೋರ್ ಕುಮಾರ್, ಈಗ ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಪರಿಶೀಲನೆ ಮಾಡಲಾಗಿದೆ ಎಲ್ಲಾ ಕೊರತೆಗಳನ್ನು ಬಗೆಹರಿಸುವಲ್ಲಿ ಪ್ರಯತ್ನಿಸಿದ್ದೇವೆ ಎಂದರು.

ಈ ವೇಳೆ ತಾಲೂಕಿನ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ರಂಜನ್ ಗೌಡ, ಶೈಲೇಶ್ ಕುಮಾರ್, ಕಾರ್ಮಿಕ ಮುಖಂಡ ಬಿ.ಎಮ್ ಭಟ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here