Site icon Suddi Belthangady

ಧರ್ಮಸ್ಥಳ ಶ್ರೀ.ಮಂ.ಸ್ವಾ.ಅ.ಹಿ.ಪ್ರಾ.ಶಾಲೆಯಲ್ಲಿ ಯಕ್ಷಗಾನ ತರಬೇತಿ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ 2023-24ನೇ ಸಾಲಿನ ಯಕ್ಷಗಾನ ತರಬೇತಿಯ ಉದ್ಘಾಟನೆಯು ಜೂ.20ರಂದು ನೆರವೇರಿತು.

ವಿದ್ಯಾರ್ಥಿನಿಯರ ಯಕ್ಷಗಾನ ನೃತ್ಯದ ಪ್ರದರ್ಶನದ ಮೂಲಕ ಕಾರ್ಯಕ್ರಮಕ್ಕೆ ಸ್ವಾಗತವನ್ನು ಮಾಡಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಪ್ರಜ್ವಲನೆಯ ಮೂಲಕ ನೆರವೇರಿಸಿದ ಧರ್ಮಸ್ಥಳ ಕೃಪಾಪೋಷಿತ ಯಕ್ಷಗಾನ ಮಂಡಳಿಯ ವ್ಯವಸ್ಥಾಪಕರಾದ ಗಿರೀಶ್ ಹೆಗ್ಡೆ ಇವರು ಮಾತನಾಡಿ, ಯಕ್ಷಗಾನ ಒಂದು ಪರಿಪೂರ್ಣ ಕಲೆ. ಇದು ಒಂದು ಆಶು ಸಾಹಿತ್ಯ, ಅಶುಪ್ರದರ್ಶನವಾಗಿದೆ.ಯಕ್ಷಗಾನ ಕಲಾವಿದರು ಎಲ್ಲಾ ಪತ್ರಗಳನ್ನು ನಿರ್ವಹಿಸಲು ತಯಾರಿ ಯಾಗಿರುತ್ತಾರೆ.ವಿದ್ಯಾರ್ಥಿ ಜೀವನದಲ್ಲಿ ಯಕ್ಷಗಾನವನ್ನು ಕಲಿತರೆ ಮುಂದಿನ ಪೀಳಿಗೆಗೆ ಮುಂದುವರೆಸಿಕೊಂಡು ಹೋಗಬಹುದು ಎಂದು ಹೇಳಿದರು.ಯಕ್ಷಗಾನ ತರಬೇತುದಾರರಾದ ಲಕ್ಷ್ಮಣ ಬೆಳಾಲು ಇವರು ಯಕ್ಷಗಾನ ಕಲೆ ನಿತ್ಯ ವಿನೂತನ.ಕಲಾವಿದನಾದವನು ತನ್ನ ಯಾವ ನೋವುಗಳಿದ್ದರೂ ಪ್ರೇಕ್ಷಕರನ್ನು ಅದ್ಭುತ ಲೋಕಕ್ಕೆ ಕರೆದುಕೊಂಡು ಹೋಗುವ ಕಲಾವಿದನಾಗಿರುತ್ತಾನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯ ಗುರುಗಳಾದ ಶ್ರೀ.ಪಿ.ಸುಬ್ರಮಣ್ಯ ರಾವ್ ಇವರು ಮಾತನಾಡಿ ಯಕ್ಷಗಾನ ಕಲಿಯುವುದರಿಂದ ಭಾಷಾ ಸ್ಪಷ್ಟತೆ ಹೆಚ್ಚುತ್ತದೆ.ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಯುತ್ತದೆ ಇದರಿಂದ ಮಕ್ಕಳು ಎಳವೆಯಲ್ಲಿಯೇ ಯಕ್ಷಗಾನ ಕಲಿಯಬೇಕು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕುಮಾರಿ ಚಿನ್ಮಯಿ ನಿರೂಪಿಸಿದ ಕಾರ್ಯಕ್ರಮವನ್ನು ಕುಮಾರಿ ಕುಸುಮಿತ ವಂದಾನರ್ಪಣೆಗೈದರು.

Exit mobile version