ಉಜಿರೆ ಎಸ್.ಡಿ.ಎಂ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

0

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಕಬಡ್ಡಿ ಚಾಂಪಿಯನ್ ಆಗಿ ಪ್ರತಿಷ್ಠಿತ ಶ್ರೀ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪರ್ಯಾಯ ಪಲಕವನ್ನು ತನ್ನದಾಗಿಸಿಕೊಂಡಿದೆ.

ಜೂ.16ರಂದು ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಕ್ರೀಡಾಂಗಣದಲ್ಲಿ ಜರಗಿದ ಫೈನಲ್ ಪಂದ್ಯಾಟದಲ್ಲಿ ಮೂಡುಬಿದ್ರೆಯ ಆಳ್ವಾಸ್ ತಂಡವನ್ನು 42-32 ಅಂಕಗಳಿಂದ ಪರಾಭವಗೊಳಿಸಿ ಪ್ರಶಸ್ತಿಯನ್ನು
ಮುಡಿಗೇರಿಸಿಕೊಂಡಿತು.
ವಿಜೇತ ತಂಡವನ್ನು ಕಾರ್ಯದರ್ಶಿಗಳಾದ ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯ ಡಿ ಹರ್ಷೇಂದ್ರ ಕುಮಾರ್ ಮತ್ತು ಪ್ರಾಂಶುಪಾಲರಾದ ಡಾ.ಬಿ.ಎ ಕುಮಾರ್ ಹೆಗ್ಡೆ ಅಭಿನಂದಿಸಿದರು.

LEAVE A REPLY

Please enter your comment!
Please enter your name here