ಎಸ್‌ಡಿಪಿಐ ಸಂಸ್ಥಾಪನಾ ದಿನ-ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

0

ಬೆಳ್ತಂಗಡಿ: ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಜೂ.21(ಇಂದು)ರಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಪಕ್ಷದ ಕಛೇರಿ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಧ್ವಾಜಾರೋಹಣವನ್ನು ಗೈದು ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿಗಳಾದ ಸಾದಿಕ್ ಲಾಯಿಲ, ಅಶ್ರಫ್ ಕಟ್ಟೆ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here