ಉಜಿರೆ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು- ಪ್ರಾಣಾಪಾಯದಿಂದ ಪಾರು

0

ಉಜಿರೆ: ಬೆಂಗಳೂರಿನಿಂದ ಉಡುಪಿಗೆ ಹೋಗುವ ಕಾರ್ ಉಜಿರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪ್ರಾಣಾಪಾಯದಿಂದ ಪಾರಾದ ಘಟನೆ ಜೂ.21ರಂದು ನಡೆದಿದೆ.

ಕಾರು ಬೆಂಗಳೂರಿನಿಂದ ಉಡುಪಿಗೆ ತೆರಳುತಿದ್ದು, ಉಜಿರೆಯ ಕೆಳಗಿನ ಪೆಟ್ರೋಲ್ ಬಂಕ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದು ಕೂಡಲೆ ವಿದ್ಯುತ್ ನಿಲುಗಡೆಗೊಂಡಿದ್ದು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಹೇರ್ ಬ್ಯಾಗ್ ತೆರೆದು ಕೊಂಡಿದೆ. ಕಾರಿಗೆ ಅಲ್ಪ ಪ್ರಮಾಣದಲ್ಲಿ ಹಾನಿಯಾಗಿದೆ.

ಕೂಡಲೆ ಸ್ಥಳಕ್ಕೆ ಸಂಚಾರಿ ಪೊಲೀಸ್ ಹಾಗೂ ಮೆಸ್ಕಾಂ ಅಧಿಕಾರಿಗಳು ಆಗಮಿಸಿ ದೂರು ದಾಖಲಿಸಿದ್ದಾರೆ.ವಿದ್ಯುತ್ ಕಂಬದ ವೆಚ್ಚ ಕಾರಿನ ಮಾಲಕರಿಗೆ ಭರಿಸುವಂತೆ ಕೋರಿದ್ದಾರೆ.

LEAVE A REPLY

Please enter your comment!
Please enter your name here