ಕಡಿರುದ್ಯಾವರ ಗ್ರಾಮದ ಮೊದಲ ಸುತ್ತಿನ ಗ್ರಾಮ ಸಭೆ-ಹಲವು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ

0

ಉಜಿರೆ: ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾ.ಪಂ. ಅಧ್ಯಕ್ಷ ಅಶೋಕ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದರ ಸಭಾಭವನದಲ್ಲಿ ಜೂನ್ 22ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿಯ ವಿರೂಪಾಕ್ಷಪ್ಪ ಅವರು ನಡೆಸಿಕೊಟ್ಟರು.

ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಚರ್ಚೆಗಳು ನಡೆದವು.ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರು ತಿಳಿಸಿದರು‌. ವಿವಿಧ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಸಿಗುವ ಸವಲತ್ತು ಹಾಗೂ ಯೋಜನೆಯ ಬಗ್ಗೆ ತಿಳಿಸಲಾಯಿತು.

ಗ್ರಾಮ ಸಭೆಯಲ್ಲಿ ಪಂ.ಉಪಾಧ್ಯಕ್ಷೆ ಬೇಬಿ, ಸದಸ್ಯರುಗಳಾದ ರಾಜೇಶ್.ಕೆ, ಸೂರಜ್ ವಳಂಬ್ರ, ಗುರುಪ್ರಸಾದ್, ರತ್ನಾವತಿ, ಸಾವಿತ್ರಿ, ನಳಿನಿ, ಲಾವಣ್ಯ ಉಪಸ್ಥಿತರಿದ್ದರು.

ಪಿಡಿಒ ಜಯಕೀರ್ತಿ ಸ್ವಾಗತಿಸಿದರು.

ಸಭೆಯಲ್ಲಿ ಕಾರ್ಯದರ್ಶಿ ಜನಾರ್ದನ ಗೌಡ, ಗ್ರಾಮಸ್ಥರು, ಆರೋಗ್ಯ ಸಹಾಯಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here