ಶಿಶಿಲ: ಹೃದಯಾಘಾತದಿಂದ‌ ಮಹಿಳೆ ಸಾವು

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಮಹಿಳೆಯೊಬ್ಬರು ಹೃದಯಾಘಾತದಿಂದ ಸಾವನನಪ್ಪಿದ ಘಟನೆ ನಡೆದಿದೆ.

ಮೃತರು ನಾಗನಡ್ಕ ಕೃಷ್ಣಪ್ಪ ಗೌಡರ ಪತ್ನಿ ಮೀನಾಕ್ಷಿ(50ವ) ಜೂ.23ರಂದು ರಾತ್ರಿ ಮಲಗಿದ್ದ ವೇಳೆಯಲ್ಲಿ ಇವರಿಗೆ ತೀವ್ರವಾದ ಎದೆ ನೋವು ಕಾಣಿಸಿಕೊಂಡಿದೆ.ಇದನ್ನು ತಿಳಿದ ಮನೆಯವರು ತಕ್ಷಣ ಪ್ರಥಮ ಚಿಕಿತ್ಸೆಯನ್ನು ಮಾಡಿದ್ದಾರೆ.ಆದರೆ ಯಾವುದೇ ಪ್ರಯೋಜನವಾಗಿಲ್ಲ.ಅಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಗಂಡ ಮತ್ತು ಓರ್ವ ಮಗನನ್ನು ಅಗಲಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ದೇಹವನ್ನು ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಮೇಲ್ನೋಟಕ್ಕೆ ಹೃದಯಘಾತ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆ ನಡೆದ ನಂತರ ಸ್ಪಷ್ಟೀಕರಣ ನೀಡಲಾಗುವುದೆಂದು ತನಿಕಾ ಅಧಿಕಾರಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here