Site icon Suddi Belthangady

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ

ನಾರಾವಿ: ಕಳೆದ ನಾಲ್ಕು ವರ್ಷಗಳಿಂದ ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿ ಇದೀಗ ಬೆಳ್ತಂಗಡಿ ಎಸ್.ಸಿ.ಡಿ.ಸಿ.ಸಿ ಶಾಖೆಗೆ ವರ್ಗಾವಣೆಗೊಂಡಿರುವ ಸುಧೀರ್ ಎಸ್ ಪಿ ಅವರಿಗೆ ಬೀಳ್ಕೊಡುಗೆ ಸಮಾರಂಭವು ನಾರಾವಿ ಶಾಖೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸುಗಮ ಕಾಂಪ್ಲೆಕ್ಸ್ ಮಾಲಕ ಪ್ರಕಾಶ್ ಜೈನ್, ನಾರಾವಿ ಸಿ.ಎ ಬ್ಯಾಂಕ್ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಸಿ.ಎ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲಾ ಎಂ.ಕೆ, ಎಸ್.ಸಿಡಿ.ಸಿ.ಸಿ ಶಾಖೆಯ ಹಾಗೂ ಸಿಎ ಬ್ಯಾಂಕ್ ನ ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದು ಗೌರವಿಸಿದರು.

Exit mobile version