ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

0

ಗುರುವಾಯನಕೆರೆ: ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇಲ್ಲಿ ಪುತ್ತೂರು ವಿವೇಕಾನಂದ ಲಾ ಕಾಲೇಜ್ ನ ಇಕೋ ಕ್ಲಬ್ ನ ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಶಾಲಾ ಆವರಣದಲ್ಲಿ ತೆಂಗಿನ ಸಸಿ, ನುಗ್ಗೆ ಗಿಡ, ಜೀಹಲಸು, ಹೂವಿನ ಗಿಡ, ಹಣ್ಣಿನ ಗಿಡ ಗಳು, ಅಲ್ಲದೇ ತರಕಾರಿ ಬೀಜ ಬಿತ್ತನೆ ಮಾಡಿರುತ್ತಾರೆ.ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಉಮಾ.ಡಿ ಗೌಡ ಇವರು ವಿದ್ಯಾರ್ಥಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು.ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here