ಧರ್ಮಸ್ಥಳ ಶ್ರೀ ಮಂ.ಅ.ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ

0

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂ.28 ರಂದು ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ 2023 ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಧರ್ಮಸ್ಥಳ ಮೆಸ್ಕಾಂ ಶಾಖಾ ಇಂಜಿನಿಯರ್ ಸುಹಾಸ್ ವಿದ್ಯಾರ್ಥಿಗಳಿಗೆ ವಿದ್ಯುತ್ ಬಳಕೆಯ ಸುರಕ್ಷತೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.
ಮುಖ್ಯ ಶಿಕ್ಷಕ ಪದ್ಮರಾಜ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಉಜಿರೆ ಬೆಸ್ಕಾಂ ಶಾಖಾ ಎಂಜಿನಿಯರ್ ಕ್ಲೆಮೆಂಟ್ ಬೆಂಜಮಿನ್ ಬೆಸ್ಕಾಂ ಧರ್ಮಸ್ಥಳ ಶಾಖೆಯ ಮೇಲ್ವಿಚಾರಕ ಅಶೋಕ್ ಜೈನ್ ಹಾಗೂ ಲೈನ್ ಮ್ಯಾನ್ ಹರಿದಾಸ್ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕ ವಿಕಾಸ್ ಆರಿಗ ಸ್ವಾಗತಿಸಿ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಶಿಕ್ಷಕ ರಂಜಿತ್ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here