ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

0

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜು.1 ರಂದು ಬೆಳ್ತಂಗಡಿ ಪಂಚಾಯತ್ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು.ಶಾಸಕ ಹರೀಶ್ ಪೂಂಜ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಹಿರಿಯ ಸಾಹಿತಿ ಪ. ರಾ. ಶಾಸ್ತ್ರೀ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಪ್ರಾಂಶುಪಾಲ ಜೋಸೆಫ್ ಎನ್. ಎಂ.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿ ಭುವನೇಶ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ ವಹಿಸಿದ್ದರು.

ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಪೆರ್ಲ ಬೈಪಾಡಿ ಪ್ರೌಢಶಾಲಾ ವಿದ್ಯಾರ್ಥಿನಿ ಕು| ಸುರಕ್ಷಿತಾ (613) ಕಾಯರ್ತಡ್ಕ ಪ್ರೌಢಶಾಲಾ ವಿದ್ಯಾರ್ಥಿನಿಯರಾದ ಕು| ಶರಣ್ಯಾ (609) ಮತ್ತು ಕು| ಎನ್. ಹಿತಾ (609) ಇವರನ್ನು ಅಭಿನಂದಿಸಲಾಯಿತು.


ಹಾಗು ಸಂಘದ ಸದಸ್ಯ ಮನೋಹರ ಬಳಂಜ ನೀಡುತ್ತಾ ಬರುತ್ತಿರುವ 6 ಕುಟುಂಬಗಳಿಗೆ ಧೃತಿ ದತ್ತಿನಿಧಿಯನ್ನು ಹಸ್ತಾಂತರ ಮಾಡಲಾಯಿತು.

ಕಾರ್ಯದರ್ಶಿ ಪ್ರಸಾದ್ ಏನಿಂಜೆ ಸ್ವಾಗತಿಸಿದರು.ಹಿರಿಯ ಸದಸ್ಯ ಆರ್. ಎನ್. ಪೂವಣಿ ಸಂದೇಶ ವಾಚಿಸಿದರು.ಗಣೇಶ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here