Site icon Suddi Belthangady

ಮಡಂತ್ಯಾರು: ಗಣೇಶೋತ್ಸವ ಸಮಿತಿಯ ಮಹಾಸಭೆ

ಮಡಂತ್ಯಾರು: ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆಯು ಜು.2ರಂದು ನಡೆಯಿತು.40 ನೇ ವರ್ಷದ ಲೆಕ್ಕಪತ್ರವನ್ನು ಮಂಡಿಸಲಾಯಿತು.

ಮಾಜಿ ಅಧ್ಯಕ್ಷ ಕಾಂತಪ್ಪ ಗೌಡ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು.41 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಬಳ್ಳಮಂಜ, ಉಪಾಧ್ಯಕ್ಷರಾಗಿ ಪದ್ಮನಾಭ ಸುವರ್ಣ, ಕಾರ್ಯದರ್ಶಿಯಾಗಿ ಸಚಿನ್, ಜೊತೆ ಕಾರ್ಯದರ್ಶಿ ಶಂಕರ್ ಶೆಟ್ಟಿ ಸೋನಂದೂರು, ಕೋಶ ಅಧಿಕಾರಿಯಾಗಿ ವೆಂಕಟ್ರಮಣ ಗೌಡ ಹೊಸಮನೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.ಉಮೇಶ್ ಸುವರ್ಣ ಸ್ವಾಗತಿಸಿ, ಸಚಿನ್ ಧನ್ಯವಾದ ಕೋರಿದರು.

Exit mobile version