Site icon Suddi Belthangady

ಮುಂಡಾಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಮುಂಡಾಜೆ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಜು.1ರಂದು ನಡೆಯಿತು.

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಲೇಜಿನ ನಿಕಟ ಪೂರ್ವ ಸಂಚಾಲಕರಾಗಿದ್ದ ಕೊರಗಪ್ಪ ನಾಯ್ಕ ಇವರು ಇವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, ಅದರ ಧ್ಯೇಯೋದ್ದೇಶಶಗಳನ್ನು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಜಾಲಿ ಒ.ಎ ಇವರು ವಿದ್ಯಾರ್ಥಿ ನಾಯಕರುಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು.

ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯ ಚಂದ್ರ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಸಂಘದ ಸಲಹೆಗಾರ ರಾದ ಪುರುಷೋತ್ತಮ ಶೆಟ್ಟಿ ಇವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಪನ್ಯಾಸಕ ಸುಭಾಷ್ ಚಂದ್ರ ಇವರು ನಿರೂಪಿಸಿ, ಉಪನ್ಯಾಸಕಿ ವಸಂತಿ ಇವರು ವಂದಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ, ಕಾರ್ಯದರ್ಶಿ ಪುಣ್ಯಶ್ರೀ, ಉಪಾಧ್ಯಕ್ಷ ಪೂಜಿತ್ , ಜೊತೆ ಕಾರ್ಯದರ್ಶಿ ವರ್ಷ ಮತ್ತು ಇತರ ನಾಯಕರುಗಳು ಉಪಸ್ಥಿತರಿದ್ದರು. ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Exit mobile version