Site icon Suddi Belthangady

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಘ ಉದ್ಘಾಟನೆ

ಬಂದಾರು: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ 2023-2024ನೇ ವಿದ್ಯಾರ್ಥಿ ಸಂಘವನ್ನು ಸರ್ಕಾರಿ ಪ್ರೌಢ ಶಾಲೆ ಕೊಯ್ಯೂರು ಇಲ್ಲಿಯ ಮುಖ್ಯೋಪಾಧ್ಯಾಯ ರಾಧಾಕೃಷ್ಣ ತಚ್ಚಮೆ ಉದ್ಘಾಟಿಸಿ ಮಾತನಾಡುತ್ತಾ ಭಾರತದಂತಹ ವಿಶಾಲ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಪ್ರತಿಯೊಬ್ಬ ಭಾರತೀಯನಿಗೂ ನಮ್ಮ ನಾಡು ನುಡಿಯ ಬಗ್ಗೆ ಅಭಿಮಾನ, ಗೌರವ ಇರಬೇಕು.
ಶಾಲೆಗಳಲ್ಲಿ ವಿದ್ಯಾರ್ಥಿ ಸಂಘಕ್ಕೆ ಚುನಾವಣೆಯ ಮೂಲಕ ನಾಯಕನನ್ನು ಆರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಸ್ಪರ್ಧೆ ಉಂಟಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುವುದೆಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಮುಖ್ಯ ಅಧ್ಯಾಪಕ ಶ್ರೀ ಬಾಲಕೃಷ್ಣ ಕೊರಮೇರು ವಹಿಸಿ ಶುಭ ಹಾರೈಸಿದರು.

ಅಧ್ಯಾಪಕ ವಿಜಯ ಕುಮಾರ್ ಎಂ ಕೊಯ್ಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲಾನಾಯಕಿ ಆದಿ ಸಹಪಾಠಿಗಳ ಸಹಕಾರದಿಂದ ಒಳ್ಳೆಯ ರೀತಿಯಲ್ಲಿ ಶಾಲೆಯ ಕೆಲಸಗಳನ್ನು ನಿರ್ವಹಿಸುತ್ತೇನೆಂದು ಅಭಿಪ್ರಾಯ ವ್ಯಕ್ತಪಡಿಸಿದಳು.

ಅಧ್ಯಾಪಕರು ಕೊರಗಪ್ಪ, ವಿವೇಕಾನಂದಗೌಡ, ಮಹೇಶ್ ಎ., ಶ್ರೀಮತಿ ಹೇಮಲತಾ, ದೀಕ್ಷಾ ಮತ್ತು ಉಪನಾಯಕ ದೀಕ್ಷಿತ್ ಉಪಸ್ಥಿತರಿದ್ದರು.

9ನೇ ತರಗತಿ ವಿದ್ಯಾರ್ಥಿನಿಯರಿಂದ ಆರಂಭವಾದ ಕಾರ್ಯಕ್ರಮದ ನಿರ್ವಹಣೆಯನ್ನು 10ನೇ ತರಗತಿ ವಿದ್ಯಾರ್ಥಿನಿ ಅವ್ಯ, ಜಯಶ್ರೀ, ಅನನ್ಯ ನಿರ್ವಹಿಸಿ ಪ್ರತಿಪಕ್ಷದ ನಾಯಕ ಶ್ರವಣ್ ಗೌಡ ಧನ್ಯವಾದ ನೀಡಿದನು.

Exit mobile version