Site icon Suddi Belthangady

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ನ ಮಾಲಕ ಬಾಲಕೃಷ್ಣ ಶೆಣೈ(ಕಿಟ್ಟು) ಹೃದಯಾಘಾತದಿಂದ ನಿಧನ

ಕಲ್ಮಂಜ: ಉಜಿರೆಯಲ್ಲಿ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ನ ಮಾಲಕ, ಕಲ್ಮಂಜ ಶಾಲಾ ಬಳಿಯ ನಿವಾಸಿ ಬಾಲಕೃಷ್ಣ ಶೆಣೈ(ಕಿಟ್ಟು 56ವ) ಅವರು ಹೃದಯಾಘಾತದಿಂದ ಜು.3ರಂದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟಿದ್ದಾರೆ.

ಮಧ್ಯಾಹ್ನ ಉಜಿರೆಯ ತನ್ನ ಕಚೇರಿಯಲ್ಲಿದ್ದ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.

ಉಜಿರೆಯಲ್ಲಿ ಕಳೆದ 20 ವರ್ಷಗಳಿಂದ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಬಂಧು-ವರ್ಗದವರನ್ನು ಅಗಲಿದ್ದಾರೆ.

Exit mobile version