Site icon Suddi Belthangady

ಮಡಂತ್ಯಾರು: ವನಮಹೋತ್ಸವ ಕಾರ್ಯಕ್ರಮ

ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಆವಣರದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್ ಸಿ ಸಿ ಘಟಕ ಹಾಗೂ ಅರಣ್ಯ ಇಲಾಖೆಯ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವು ಜು.4ರಂದು ನಡೆಯಿತು.

ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

ಈ ಮೂಲಕ ಪರಿಸರ ಸಂರಕ್ಷಣೆ ಹಾಗೂ ಜಾಗೃತಿಯನ್ನು ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಅಲೆಕ್ಸ್ ಐವನ್ ಸಿಕ್ವೇರಾ, ಮಡಂತ್ಯಾರು ಡೆಪ್ಯುಟಿ ಆರ್.ಎಫ್.ಒ ರಾಜಶೇಖರ್, ಅರಣ್ಯಾಧಿಕಾರಿಗಳಾದ ಸತೀಶ್ ಡಿಸೋಜ, ಪರಮೇಶ್ವರ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರಶಾಂತ್ ಎಮ್. ಎನ್ ಸಿ ಸಿ ಆಫೀಸರ್ ರಾದ ಲೆಫ್ಟಿನೆಂಟ್ ಆಲ್ವಿನ್ ಕೆ.ಜಿ. , ಜೆ.ಆರ್.ಪಾಯಿಸ್ , ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು- ಸೇವಕಿಯರು ಮತ್ತು ಎನ್ ಸಿ ಸಿ ಕೆಡೆಟ್ ಗಳು ಉಪಸ್ಥಿತರಿದ್ದರು.

Exit mobile version