Site icon Suddi Belthangady

ಕನ್ಯಾಡಿಯಲ್ಲಿ ಇಂಡಿಯನ್ ಬ್ಯಾಂಕ್ ಧರ್ಮಸ್ಥಳ ಶಾಖೆಯ ಉದ್ಘಾಟನೆ

ಧರ್ಮಸ್ಥಳ: ಇಂಡಿಯನ್ ಬ್ಯಾಂಕ್ ಇದರ ನೂತನ ಧರ್ಮಸ್ಥಳ ಶಾಖೆ ಕನ್ಯಾಡಿ ಶ್ರೀ ರಾಮ ಮಂದಿರದ ಎದುರು ಜು.6 ರಂದು ಉದ್ಘಾಟನೆಗೊಂಡಿತು.

ನೂತನ ಶಾಖೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಲ್.ಹೆಚ್.ಮಂಜುನಾಥ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಫೀಲ್ಡ್ ಜನರಲ್ ಮ್ಯಾನೇಜರ್ ಸುಧೀರ್ ಕುಮಾರ್ ಗುಪ್ತ ಭಾಗವಹಿಸಿದ್ದರು.ಕಟ್ಟಡ ಮಾಲಕಿ ರವಿಜಾ ಎಸ್.ರಾವ್ ನೂತನ ಎಟಿಎಂ ಉದ್ಘಾಟಿಸಿದರು.

ಮೈಸೂರು ಪ್ರಾದೇಶಿಕ ವ್ಯವಸ್ಥಾಪಕ ಅನಿಲ್ ಆರ್.ಕುಲಕರ್ಣಿ, ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ನಿರ್ದೇಶಕ ರಾಜೇಶ್, ಬ್ಯಾಂಕ್ ನ ವಿವಿಧ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು, ಗ್ರಾಹಕರು ಉಪಸ್ಥಿತರಿದ್ದರು.

ಮಂಗಳೂರು ಶಾಖೆಯ ಸಿಬ್ಬಂದಿ ಜೇಸನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಧರ್ಮಸ್ಥಳ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಎನ್. ವಂದಿಸಿದರು.

Exit mobile version