Site icon Suddi Belthangady

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಸಭೆ

ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉಜಿರೆ ಇದರ ವಾರ್ಷಿಕ ಮಹಾ ಸಭೆ ಮತ್ತು ಕ್ರೀಡಾಕೂಟದ ಕುರಿತು ಸಮಾಲೋಚನೆ ಸಭೆ ಉಜಿರೆ ಶಾರದಾ ಮಂಟಪದಲ್ಲಿ ಜು.3 ರಂದು ಗ್ರಾಮ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಿತಿಯ ಉಪಾಧ್ಯಕ್ಷ ಗೋಪಾಲಕೃಷ್ಣ ಜಿ.ಕೆ ಜು.9 ರಂದು ನಡೆಯುವ ಕ್ರೀಡಾಕೂಟ ಮತ್ತು ಜು.23 ರಂದು ನಡೆಯುವ ಮಹಾ ಸಭೆಯ ವಿವರ, ಮಾಹಿತಿ ನೀಡಿದರು.

ವಲಯ ಅಧ್ಯಕ್ಷ ಶೇಖರ ಗೌಡ ಪ್ರಾಸ್ತವಿಕವಾಗಿ ಮಾತನಾಡಿದರು.ಜತೆ ಕಾರ್ಯದರ್ಶಿ ಲಕ್ಷ್ಮಣ ಗೌಡ ಕಾರ್ಯಕ್ರಮಗಳ ಮಾಹಿತಿ ನೀಡಿದರು.

ಸಂಚಾಲಕ ಆನಂದ ಗೌಡ, ಉಪಾಧ್ಯಕ್ಷ ರಮೇಶ್ ಪೈಲಾರ್, ಸದಸ್ಯರು ಹಾಜರಿದ್ದರು.

ಸಮಿತಿಯ ಗೌರವ ಅಧ್ಯಕ್ಷ ಪ್ರಕಾಶ್ ಗೌಡ ಸ್ವಾಗತಿಸಿ, ಕೋಶಾಧಿಕಾರಿ ಬಾಲಕೃಷ್ಣ ಕೋರ ಮೇರು ವಂದಿಸಿದರು.

Exit mobile version