Site icon Suddi Belthangady

ಬೆಳಾಲು: ಪಿನಾರಿಯಲ್ಲಿ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿನಾರಿ ಎಂಬಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಬೆಳಾಲು, ಗ್ರಾಮ ಅರಣ್ಯ ಸಮಿತಿ ವತಿಯಿಂದ ಜು.6 ರಂದು ವಿವಿಧ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಗಸ್ತು ಎಂ.ಲೋಕೇಶ್, ಬೆಳಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀ ಬಾಯಿ ಹೆಚ್., ವನಪಾಲಕ ವಿನಯ ಚಂದ್ರ ಆಳ್ವ, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಹರೀಶ್ ಗೌಡ, ಸಮಿತಿ ಸದಸ್ಯರು, ಪಂಚಾಯತ್ ಸಿಬ್ಬಂದಿ ಶಶಿಧರ, ಉಜಿರೆ ಶ್ರೀ ಧ. ಮ. ಕಾಲೇಜು ಎಂ ಎಸ್ ಡಬ್ಲ್ಯೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Exit mobile version