ಎಸ್.ಡಿ.ಎಂ ಪ್ರಕೃತಿ ಚಿಕಿತ್ಸಾಲಯಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

0

ನೇತ್ರಾವತಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು.

ಪ್ರಕೃತಿ ಚಿಕಿತ್ಸಾಲಯದಲ್ಲಿರುವ ವಿಶೇಷ ಸೌಲಭ್ಯಗಳ ಬಗ್ಗೆ, ವಿನೂತನ ತಂತ್ರಜ್ಞಾನ,ವಿವಿಧ ಬಗೆಯ ಪ್ರಕೃತಿ ಚಿಕಿತ್ಸೆಯ ಬಗ್ಗೆ ತಿಳಿದುಕೊಂಡರು.ಚಿಕಿತ್ಸಾಲಯದ ಎಲ್ಲಾ ಬ್ಲಾಕ್ ಗಳಿಗೂ ತೆರಳಿ ಆಸ್ಪತ್ರೆಯ ಬಗ್ಗೆ ತಿಳಿದುಕೊಂಡರು.

ಈ ವೇಳೆ ಚಿಕಿತ್ಸಾಲಯದ ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಸಾದ್ ಶೆಟ್ಟಿ, ಶಾಂತವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ, ಆಡಳಿತಾಧಿಕಾರಿ ಯು ಜಗನ್ನಾಥ್, ಯೋಗ ನಿರ್ದೇಶಕರು ಡಾ.ಶಶಿಕಾಂತ್ ಜೈನ್, ಸ್ಥಾನಿಕ ವೈದ್ಯಾಧಿಕಾರಿ ಡಾ.ಶಶಿಕಿರಣ್, ಕೆಪಿಸಿಸಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜನ್ ಜಿ ಗೌಡ, ಶೈಲೇಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ನಾಗೇಶ್, ದಯಾನಂದ ಬೆಳಾಲ್ ಮುಂತಾದವರು ಜೊತೆಗಿದ್ದರು.

LEAVE A REPLY

Please enter your comment!
Please enter your name here