ಉಜಿರೆ: ಶ್ರೀ ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ- ಪದವಿ ಪ್ರದಾನ ಸಮಾರಂಭ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಉಜಿರೆಯಲ್ಲಿ ಜು. 8 ರಂದು ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಇಪ್ಪತ್ತೊಂಬತ್ತನೇಯ ಪದವಿ ಪ್ರದಾನ ಸಮಾರಂಭ ನಡೆಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ವಿಧಾನ ಪರಿಷತ್ ಸಚಿವ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್‌. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ಧ. ಮ. ಪ್ರಕೃತಿ ಮತ್ತು ಯೋಗ ಕಾಲೇಜು ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು.

ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು. ವಿವಿಧ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here