ಡಾ.ಸದಾನಂದ ಪೂಜಾರಿಯವರಿಗೆ ಡಾ.ಬಿ.ಸಿ.ರಾಯ್ ಪ್ರಶಸ್ತಿ

0

ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ವೈದ್ಯಕೀಯ ಕ್ಷೇತ್ರದಲ್ಲಿ ಗಮನಾರ್ಹವಾದ ಸಾಧನೆ ಮಾಡಿದ ವೈದ್ಯರಿಗೆ ನೀಡುವ ಪ್ರತಿಷ್ಟಿತ ಡಾ.ಬಿ.ಸಿ.ರಾಯ್ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞ ರಾದ ಡಾ.ಸದಾನಂದ ಪೂಜಾರಿಯವರಿಗೆ ರಾಜ್ಯ ಸರ್ಕಾರ ನೀಡಿ ಗೌರವಿಸಿದೆ.

ಜು.1 ರಂದು ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಶಾಸಕರಾದ ರಿಜ್ವಾನ್ ಅರ್ಶದ್, ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿ.ಕೆ, ಆಯುಕ್ತರಾದ ರಂದಿಪ್, ಕೆ.ಜಿ.ಎಮ್.ಒ ಅಧ್ಯಕ್ಷರಾದ ವಿವೇಕ್ ದೊರೈ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

LEAVE A REPLY

Please enter your comment!
Please enter your name here