Site icon Suddi Belthangady

ಬೆಂಗಳೂರಿನಲ್ಲಿ ರಸ್ತೆ ಅಪಘಾತ- ಪತ್ರಿಕೋದ್ಯಮ ಪ್ರಾದ್ಯಾಪಕ- ಎಸ್.ಡಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿ ಪೌಲ್ ಬಲಿ

ಬೆಂಗಳೂರು: ಇಲ್ಲಿನ ಬಿಡದಿ ಕಾರು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವ ಪತ್ರಕರ್ತ, ಎಸ್ ಡಿ ಎಂ ಕಾಲೇಜು ಉಜಿರೆಯ ಹಳೆ ವಿದ್ಯಾರ್ಥಿ ಪೌಲ್ ಜುಲೈ 11ರಂದು ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಸೆಂಟ್ ಫೌಲ್ ಕಾಲೇಜಿನಲ್ಲಿ ಪತ್ರಿಕೋದ್ಯಮ ಪ್ರಾದ್ಯಾಪಕರಾಗಿದ್ದ ಫೌಲ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸುಮಾರು 25 ದಿನಗಳ ಕಾಲ ಬೆಂಗಳೂರಿನ ಮಡಿವಾಳದಲ್ಲಿರುವ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು. ಎಸ್ ಡಿ ಎಂ ಕಾಲೇಜು ಉಜಿರೆಯಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದ ಫೌಲ್ 2014 ರಿಂದ 2018ರವರೆಗೆ ವಿದ್ಯಾಭ್ಯಾಸ ಮಾಡಿದ್ದರು. ಮೂಲತ ಮೈಸೂರಿನವರಾದ ಫೌಲ್ ನಿಧನಕ್ಕೆ ಎಸ್ ಡಿ ಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಕಂಬನಿ ಮಿಡಿದಿದೆ.

Exit mobile version